
ಕಡೂರು: ತಂಗಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಕೆ.ಆರ್.ಗಿರೀಶ್ ಮತ್ತು ಉಪಾಧ್ಯಕ್ಷೆಯಾಗಿ ಆರತಿ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದೆ ಅಧ್ಯಕ್ಷರಾಗಿದ್ದ ರಮೇಶ್ ಮತ್ತು ಉಪಾಧ್ಯಕ್ಷೆ ವಿಜಯಾಬಾಯಿ ಅವರ ರಾಜೀನಾಮೆಯಿಂದ ಈ ಸ್ಥಾನಗಳು ತೆರವಾಗಿದ್ದವು. ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಅಶೋಕ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಸೇರಿದಂತೆ ಹಲವಾರು ಗಣ್ಯರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪಿಡಿಓ ಸುನಿಲ್, ಕೃಷ್ಣಾನಾಯ್ಕ ಇದ್ದರು
