ಚಿಕ್ಕಮಗಳೂರು: ಒತ್ತುವರಿಯಾಗಿದ್ದ ಜಮೀನನ್ನು ನ್ಯಾಯಾಲಯದ ಆದೇಶದಂತೆ ಅರಣ್ಯ ಇಲಾಖೆ ತೆರವುಗೊಳಿಸಿದೆ.
ಭಧ್ರಾ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಬರುವ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿತ್ತು. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಾಫಿ ಬೆಳೆಯಲಾಗಿತ್ತು.ಚಿಕ್ಕಮಗಳೂರು ನಗರದ ವ್ಯಕ್ತಿಯೊಬ್ಬರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದರು.ಒತ್ತುವರಿ ತೆರವಿಗೆ ನ್ಯಾಯಾಲಯ ಆದೇಶಿಸಿತ್ತು. ಫಸಲಿಗೆ ಬಂದ ಕಾಫಿ ಗಿಡಗಳನ್ನು ಕಡಿದು ಹಾಕಿ ಒತ್ತುವರಿಯಾಗಿದ್ದ ಭೂಮಿಯನ್ನು ತೆರವುಗೊಳಿಸಲಾಯಿತು. ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
