Spread the love

 

ಚಿಕ್ಕಮಗಳೂರು: ಕಳಸ ತಾಲ್ಲೂಕು ಹಳುವಳ್ಳಿ ಬಳಿಯ ಮುಜೇಖಾನ್ ನಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ಈ ಪರಿಸರದಲ್ಲಿ ಬಹಳಷ್ಟು ದಿನದಿಂದ ಓಡಾಡುತ್ತಿದ್ದ ಚಿರತೆ ಜನರಲ್ಲಿ ಆತಂಕ ಹುಟ್ಟಿಸಿತ್ತು.ಜಾನುವಾರುಗಳು,ನಾಯಿಗಳ ಮೇಲೆ ಧಾಳಿ ಮಾಡುತ್ತಿದ್ದ ಚಿರತೆಯಿಂದ ಜನರು ಓಡಾಡಲೂ ಭಯಪಡುವ ವಾತಾವರವಿತ್ತು.ಚಿರತೆ ಸೆರೆಗೆ ಜನರು ಒತ್ತಾಯಿಸಿದ್ದರು. ಅರಣ್ಯ ಇಲಾಖೆ ಕ್ರಮದಿಂದ ಚಿರತೆ ಸೆರೆಯಾಗಿದ್ದು,ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!