
ಕಡೂರು: ತಾಲ್ಲೂಕಿನ ಮಚ್ಚೇರಿಯ ಸೌಮ್ಯಯೋಗಾನರಸಿಂಹ ದೇವಸ್ಥಾನದ ಮೂರನೇ ವಾರ್ಷಿಕೋತ್ಸವ ಜೂನ್ 14 ರ ಶನಿವಾರ ನಡೆಯಲಿದೆ.
ಅಂದು ಬೆಳಿಗ್ಗೆ ದೇವಸ್ಥಾನದಲ್ಲಿ ನರಸಿಂಹ ಮೂಲ ಮೂರ್ತಿಗೆ ಅಭಿಷೇಕ, ಶಾಂತಿ ಹೋಮ, ಅಲಂಕಾರ, ಶಾತ್ತುಮೊರೈ, ಮಹಾಮಂಗಳಾರತಿ,ಪ್ರಸಾದ ವಿನಿಯೋಗ ನಡೆಯಲಿದೆ. ಮೇಲುಕೋಟೆ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ರಾಮಾನುಜ ಯತಿರಾಜ ಜೀಯರ್ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ ಎಂದು ದೇವಸ್ಥಾನದ ಧರ್ಮದರ್ಶಿ ಸಮಿತಿ ಪ್ರಕಟಣೆ ತಿಳಿಸಿದೆ.
