

ಕಡೂರು: ಪಟ್ಟಣದ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಮುಂಭಾಗ ಬಸ್ ಢಿಕ್ಕಿಯಾಗಿ ತೀವ್ರ ಗಾಯಗೊಂಡ ಯುವಕನೋರ್ವ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ಪಟ್ಟಣದ ಸುಭಾಷ್ ನಗರದ ಹುಸೇನ್( 21) ಮೃತಪಟ್ಟವರು.
ಬೈಕ್ ನಲ್ಲಿ ಬರುತ್ತಿದ್ದಾಗ ಸರ್ಕಾರಿ ಬಸ್ ಢಿಕ್ಕಿಯಾಗಿ ತೀವ್ರ ಗಾಯಗೊಂಡ ಹುಸೇನ್ ನನ್ನು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ ಮೃತಪಟ್ಟಿದ್ದಾರೆ..

