
ತರೀಕೆರೆ:ಮೃಗಶಿರೆ ಮಳೆಯ ಆರ್ಭಟ ಮುಂದುವರೆದಿದೆ…ತರೀಕೆರೆ ತಾಲ್ಲೂಕಿನ ಕಲ್ಹತ್ತಿಗಿರಿ ಜಲಪಾತದ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಕಾರೊಂದರ ಮೇಲೆ ಮರವೊಂದು ಉರುಳಿಬಿದ್ದು, ಕಾರು ಸಂಪೂರ್ಣ ಜಖಂ ಆಗಿದೆ.ಕಾರಿನಲ್ಲಿ ಯಾರೂ ಇಲ್ಲದ್ದರಿಂದ ಅನಾಹುತವಾಗುವುದು ತಪ್ಪಿದೆ.ಲಿಂಗದಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
