ಚಿಕ್ಕಮಗಳೂರು: ಯೂನಿಫಾರಂ ಇಲ್ಲವೆಂದು ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತರೀಕೆರೆ ತಾಲ್ಲೂಕಿನ ಶಾಲೆಯೊಂದರ ವಿದ್ಯಾರ್ಥಿನಿ ಶಾಲೆಯಲ್ಲಿ ಯೂನಿಫಾರ್ಮ್ ಕೇಳಿದ್ದಾರೆ. ಮನೆಯಲ್ಲಿ ಯೂನಿಫಾರ್ಮ್ ಕೇಳಿದಾಗ ಎರಡು ದಿನದಲ್ಲಿ ಕೊಡಿಸುತ್ತೇನೆಂದು ಪೋಷಕರು ಹೇಳಿದ್ದರು.ಮನನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಅಸ್ವಸ್ಥಳಾಗಿದ್ದಾಳೆ.ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
