– ಕಂದಾಯ ದಿನಾಚರಣೆ ಪ್ರಯುಕ್ತ ಗಿಡ ನೆಟ್ಟ ತಹಶೀಲ್ದಾರ್ ಪೂರ್ಣಿಮಾ.
– ಕಂದಾಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರಗಳ ವಿತರಣೆ.
———–
ಕಡೂರು: ಕಂದಾಯ ದಿನದ ಪ್ರಯುಕ್ತ ತಾಲ್ಲೂಕು ಕಚೇರಿಯ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ತಹಶೀಲ್ದಾರ್ ಪೂರ್ಣಿಮಾ ಮಾತನಾಡಿ, ಕಂದಾಯ ಇಲಾಖೆ ಸದಾ ಕಾಲವೂ ಸಾರ್ವಜನಿಕ ಸೇವೆಯಲ್ಲಿ ನಿರತವಾಗಿದೆ. ಇಲಾಖೆಯ ಎಲ್ಲ ನೌಕರ ವರ್ಗಕ್ಕೆ ಶುಭಾಷಯಗಳನ್ನು ಕೋರುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ನೌಕರರಿಂದ ಮೂರು ಶಾಲೆಗಳ 45 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮುಂತಾದ ಪರಿಕರಗಳನ್ನು ವಿತರಿಸಲಾಯಿತು.

