Spread the love

.ತರೀಕೆರೆ: ಕೆಲವೇ ದಿನಗಳ ಹಿಂದೆ ಚಿರತೆ ಧಾಳಿಗೆ ಐದು ವರ್ಷದ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಬಾಲಕನೊಬ್ಬನ ಮೇಲೆ ಚಿರತೆ ಧಾಳಿ ಮಾಡಿದೆ‌.
ತರೀಕೆರೆ ತಾಲ್ಲೂಕಿನ ಭೈರಾಪುರ ಗ್ರಾಮದಲ್ಲಿ ಮನೆಯ ಬಳಿ ನಿಂತಿದ್ದ 11 ವರ್ಷದ ಬಾಲಕ ಹೃದಯ್ ಮೇಲೆ ಶುಕ್ರವಾರ ಚಿರತೆ ಧಾಳಿ ಮಾಡಿದೆ. ಅದೃಷ್ಟವಶಾತ್ ಬಾಲಕ ಬದುಕುಳಿದಿದ್ದಾನೆ. ಗಂಭೀರ ಗಾಯಗೊಂಡ ಹೃದಯ್ ನನ್ನು ಶಿಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ‌.ಲಿಂಗದಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!