Spread the love

ಕಡೂರು: ತಾಲ್ಲೂಕಿನ ಲಕ್ಕೇನಹಳ್ಳಿ ತಾಂಡ್ಯದ ಸರ್ಕಾರಿ ಗೋಮಾಳದಲ್ಲಿ ಇಸ್ಪೀಟ್ ಆಡುತ್ತಿದ್ದ 9 ಜನರನ್ನು ವಶಕ್ಕೆ ಪಡೆದು ಕಡೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಸ್ಪೀಟ್ ಆಟದಲ್ಲಿ ಬಳಸಿದ್ದ 33350 ರೂಪಾಯಿಗಳನ್ನು ವಶಪಡಿಕೊಳ್ಳಲಾಗಿದೆ.

ಇಸ್ಪೀಟ್ ಆಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಕಡೂರು ಪೊಲೀಸರು ಪಿಎಸೈ ಸಜಿತ್ ಕುಮಾರ್ ಅವರ ನೇತೃತ್ವದಲ್ಲಿ ಧಾಳಿ ನಡೆಸಿದ್ದಾರೆ.ಪೊಲೀಸ್ ತಂಡದಲ್ಲಿ ಸಿಬ್ಬಂದಿಗಳಾದ ರೇಣುಕಾ ಪ್ರಸಾದ್,ಧನಪಾಲನಾಯ್ಕ,ಸ್ವಾಮಿ,ಮಧುಕುಮಾರ್,ಮಂಜುನಾಥ್,ಸುರೇಶ್,ಶಿವು ಭಾಗವಹಿಸಿದ್ದರು.

Balaji.M.V

By Balaji.M.V

ಸ್ಥಳೀಯ ಸುದ್ದಿಗಳು, ವಿಶೇಷ ಸ್ಥಳಗಳು, ಐತಿಹಾಸಿಕ ಮಹತ್ವದ ತಾಣಗಳ ಕುರಿತು ವಿವರ, ಸಂದರ್ಶನ, ಲೇಖನಗಳು, ವಿಮರ್ಶೆ,ಪ್ರಚಲಿತ ವಿದ್ಯಮಾನಗಳು, ಸಾರ್ವಜನಿಕ ಕುಂದುಕೊರತೆ ಇವೆಲ್ಲವೂ ಇಲ್ಲಿ ಲಭ್ಯ

Leave a Reply

Your email address will not be published. Required fields are marked *

error: Content is protected !!